
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.