
ಪ್ರಗತಿವಾಹಿನಿ ಸುದ್ದಿ : *ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ನೀಡಿದೆ.*
*ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿದೆ.*
ಇದರಿಂದಾಗಿ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ. ಶಿಕ್ಷೆ ವಿಧಿಸಿದ್ದರಿಂದ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿತ್ತು. ಮುಂದಿನ ಪ್ರಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.
ಜನಾರ್ಜನ ರೆಡ್ಡಿ ಜೊತೆಗೆ ಇನ್ನೂ ನಾಲ್ವರಿಗೆ ಜಾಮೀನು ಸಿಕ್ಕಿದೆ.