Kannada NewsKarnataka NewsLatest

ಮಾಜಿ ಪ್ರಧಾನಿ ಅಟಲ್ ಜನ್ಮ ದಿನಾಚರಣೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಅಜಾತ ಶತ್ರು, ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು, ಚಿಕ್ಕೋಡಿ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಕಾಗವಾಡದಲ್ಲಿ ಆಚರಿಸಲಾಯಿತು.
ರಾಜ್ಯ ಜವಳಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಶ್ರೀಮಂತ ಪಾಟೀಲ, ಬಿಜೆಪಿ ಓಬಿಸಿ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಟಲ್ ಬಿಹಾರಿ ವಾಜಪೇಯಿ ಅವರ ತತ್ವಾದರ್ಶಗಳನ್ನು ವಿವರಿಸಿದರು. ಜೊತೆಗೆ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.
ಈ ಕಾರ್ಯಕ್ರಮದಲ್ಲಿ ವಾಜಪೇಯಿ ಅವರ ಪ್ರತಿಮೆಗೆ ಹಾಗೂ ಗೋಮಾತೆಗೆ ಪೂಜೆ ಸಲ್ಲಿಸಲಾಯಿತು. ಸ್ವಚ್ಛ ಭಾರತ ಅಭಿಯಾನ, ರೈತ ದಿನ ಮತ್ತು ಸುಶಾಸನ ದಿನವನ್ನು ಸಹ ಆಚರಿಸಲಾಯಿತು.
 ಕಾಗವಾಡ ಮಂಡಲದ ಅಧ್ಯಕ್ಷ ತಮ್ಮನ್ನ ಪರಾಶೆಟ್ಟಿ, ಚಿಕ್ಕೋಡಿ ಜಿಲ್ಲೆ ಓಬಿಸಿ ಮೋರ್ಚಾ ಅಧ್ಯಕ್ಷ  ಶ್ರೀಶೈಲ ಶೇಳ್ಳೆಪಗೊಳ, ಓಬಿಸಿ ಮೋರ್ಚಾ ಕಾಗ್ವಾಡ ಅಧ್ಯಕ್ಷ ಬಾಬು ಮೆಡಿಗೇರಿ, ಓಬಿಸಿ ಮೋರ್ಚಾ ಚಿಕ್ಕೋಡಿ ಜಿಲ್ಲೆಯ ಉಪಾಧ್ಯಕ್ಷ ಅನಿಲ ನವಳಿಗೇರ, ಪಿ.ಏಲ್.ಡಿ ಬ್ಯಾಂಕ್ ಚೇರ್ಮನ   ಶೀತಲ ಪಾಟೀಲ, ಕಾಗ್ವಾಡ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀದೇವಿ ಚೌಗಿಲಾ ಮತ್ತು ಚಿಕ್ಕೋಡಿ ಜಿಲ್ಲೆಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ವಿಮಲಾ ಪಾಟೀಲ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button