Kannada NewsKarnataka NewsLatestNationalPolitics

*ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ನಿಧನ*

ಪ್ರಗತಿವಾಹಿನಿ ಸುದ್ದಿ :  ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್‌ ಜೈಸ್ವಾಲ್‌ (81) ಶುಕ್ರವಾರ ನಿಧನರಾದರು.

ಶುಕ್ರವಾರ ಸಂಜೆ ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಕಿದ್ವಾಯಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜೈಸ್ವಾಲ್ ಸಾವನ್ನಪ್ಪಿದ್ದಾರೆ.

Home add -Advt

ಜೈಸ್ವಾಲ್‌ ಅವರು ಪತ್ನಿ ಮಾಯಾ ರಾಣಿ ಜೈಸ್ವಾಲ್, ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

1989 ರಲ್ಲಿ ಕಾನ್ಪುರದ ಮೇಯರ್ ಆಗಿ ಗಮನಾರ್ಹ ಅವಧಿಯನ್ನು ಹೊಂದಿದ್ದರು. ಅವರು 1999, 2004 ಮತ್ತು 2009 ರಲ್ಲಿ ಆಯ್ಕೆಯಾದ ಕಾನ್ಪುರ ಪ್ರತಿನಿಧಿಸುವ ಸಂಸತ್ ಸದಸ್ಯರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದರು. 2000 ರಿಂದ 2002 ರವರೆಗೆ ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರು ಸೇರಿದಂತೆ ಅವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಕೇಂದ್ರ ಸಚಿವರಾಗಿಯೂ ಜೈಸ್ವಾಲ್ ಉತ್ತಮ ಸೇವೆ ಸಲ್ಲಿಸಿದ್ದರು.

ಜೈಸ್ವಾಲ್‌ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇವತ್ತು ಜೈಸ್ವಾಲ್‌ ಅಂತ್ಯಕ್ರಿಯೆ ನಡೆಯಲಿದೆ. ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

Related Articles

Back to top button