Belagavi NewsBelgaum NewsKannada NewsKarnataka NewsLatest

*BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಪ್ರತಿಭಟನೆ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್*

ಪ್ರಗತಿವಾಹಿನಿ ಸುದ್ದಿ: ಒಂದು ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಇಂದು 9ನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದಿದೆ.

Home add -Advt

ಬೆಳಗಾವಿಯ ಹತ್ತರಗಿ ಬಳಿ ಕಬ್ಬು ಬೆಳೆಗಾರರು ಹೋರಾಟ ತೀವ್ರಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಗಳನ್ನು ತಂದು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದು, ಏಕಾಏಕಾ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಆಗಿರುವುದರಿಂದ ಬಸ್ ಗಳು, ವಾಹನ ಸಚಾರ ಬಂದ್ ಆಗಿದ್ದು, ಸಾಲು ಸಾಲಾಗಿ ವಾಹನಗಳು ರಸ್ತೆಯಲ್ಲಿಯೇ ನಿಂತಿವೆ. ಸರ್ಕಾರ ನಮ್ಮ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಹೋರಾಟ ಇನ್ನೂ ತೀವ್ರಗೊಳ್ಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಈ ನಡುವೆ ರೈತರ ಹೋರಾಟಕ್ಕೆ ಕರವೇ ಕಾರ್ಯಕರ್ತರು, ಮಾಜಿ ಸೈನಿಕರು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ.


Related Articles

Back to top button