Karnataka NewsLatestPolitics
*ನವೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಮುಂದಿನ ಸಿಎಂ ಬಗ್ಗೆಯೂ ಭವಿಷ್ಯ ನುಡಿದ ಪರಿಷತ್ ಸದಸ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗಲಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದು ಹೇಳಿದರು.
ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಥವಾ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗಬಹುದು ಎಂದು ಹೇಳಿದ್ದಾರೆ. ಹೆಚ್. ವಿಶ್ವನಾಥ್ ಹೇಳಿಕೆ ಇದೀಗ ಮತ್ತೆ ಸಿಎಂ ಬದಲಾವಣೆ ಚರ್ಚೆಯನ್ನು ಹುಟ್ಟುಹಾಕಿದೆ.