CrimeKannada NewsKarnataka NewsNationalPolitics

*ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿ: ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ: ಇಂದು ಬೆಳ್ಳಂ ಬೆಳಗ್ಗೆ ಕಬ್ಬು ತುಂಬುವ ಟ್ರ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. 

Home add -Advt

ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ.

ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ. 

ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button