
ಪ್ರಗತಿವಾಹಿನಿ ಸುದ್ದಿ, ಖಾನಾಪುರ -ಕರ್ನಾಟಕ ಹಾಗೂ ಗೋವಾ ಗಡಿಯಲ್ಲಿರುವ ಗೋವಾ ರಾಜ್ಯದ ಸತ್ತೇರಿ ಬಳಿ ಹುಲಿಗಳ ಕಳೇಬರ ಪತ್ತೆಯಾಗಿದೆ.
ವಿಷ ಹಾಕಿ ಒಂದು ಹೆಣ್ಣು, 3 ಗಂಡು ಹುಲಿಗಳ ಹತ್ಯೆಗೈದಿರುವ ಶಂಕೆಯನ್ನು ಅರಣ್ಯ ಇಲಾಖೆ ವ್ಯಕ್ತಪಡಿಸಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ತನಿಖೆ ಕೈಗೊಂಡಿರುವ ಗೋವಾ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಉಭಯ ರಾಜ್ಯಗಳ ಗಡಿಯಲ್ಲಿ ಘಟನೆ ನಡೆದ ಕಾರಣ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ , ಗೋವಾ ರಾಜ್ಯದ ಉನ್ನತ ಅಧಿಕಾರಿಗಳು, ಕರ್ನಾಟಕದ ಅರಣ್ಯ ಇಲಾಖೆ ಜೊತೆ ಸಂಪರ್ಕ ಸಾಧಿಸಿದ್ದಾರೆ. ಮೃತ ಹುಲಿಗಳ ಪೈಕಿ ಎರಡು ಮರಿಗಳು ಸೇರಿವೆ. ಹುಲಿಗಳ ಹತ್ಯೆ ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ