Kannada NewsKarnataka NewsNationalPolitics
*ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸ್ಸಾದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ : ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 30 ಜನ ಪ್ರವಾಸಿಗರು ಸಾವನ್ನಪ್ಪಿದ್ದು, ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ಮೊಟಕುಗೊಳಿಸಿ ದೇಶಕ್ಕೆ ವಾಪಸ್ ಆಗಮಿಸಿದ್ದಾರೆ.
ಭಾರತಕ್ಕೆ ಆಗಮಿಸುತ್ತಿದಂತೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಉಗ್ರರ ದಾಳಿಯ ಬಗ್ಗೆ ಮಾಹಿತಿ ಪಡೆದಿರುವ ಪ್ರಧಾನಿ ಮೋದಿ ಮುಂದಿನ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಈಗಾಗಲೇ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರಕ್ಕೆ ತೆರಳಲಿದ್ದು ಉಗ್ರರ ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ.


