Kannada NewsKarnataka NewsLatest

*ವಿದ್ಯಾರ್ಥಿಗಳ ಗಮನಕ್ಕೆ: ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆ ಆರಂಭ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಂದಿನಿಂದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಇರುವುದರಿಂದ ಹೆಣ್ಣು ಮಕ್ಕಳು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ನೂತನ ಉಚಿತ ಬಸ್ ಪಾಸ್ ಸೌಲಭ್ಯವು ಕೇವಲ ಗಂಡು ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಅನ್ವಯಿಸಲಿದ್ದು, ಅವರು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬೇಕಾಗುತ್ತದೆ.

Home add -Advt

ಈಗಾಗಲೇ ಹಣ ನೀಡಿ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮುಂದಿನ 15 ದಿನಗಳಲ್ಲಿ ಹಣ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ‘ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಆಧಾರ್ ಕಾರ್ಡ್
ಶಾಲಾ/ಕಾಲೇಜು ಪ್ರವೇಶಾತಿ ರಶೀದಿ
ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಫೋಟೋಗಳು
ಮುಖ್ಯವಾಗಿ, ಆನ್‌ಲೈನ್ ಅರ್ಜಿಯ ಪ್ರತಿಯಲ್ಲಿ ವಿದ್ಯಾರ್ಥಿ ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (Principal/Head Master) ಕಡ್ಡಾಯವಾಗಿ ಸಹಿ ಮತ್ತು ಅಧಿಕೃತ ಸೀಲ್ ಹಾಕಿಸಿಕೊಂಡಿರಬೇಕು.

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆಯಾ ಅರ್ಜಿಗಳನ್ನು ಬಿಎಂಟಿಸಿ , ಕೆಎಸ್‌ಆರ್‌ಟಿಸಿ, ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಪಾಸ್ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ವಿದ್ಯಾರ್ಥಿಯ ಶಾಲಾ-ಕಾಲೇಜಿನ ಮಾಹಿತಿ ನಿಖರವಾಗಿದ್ದಲ್ಲಿ ಅರ್ಜಿಯನ್ನು ಅನುಮೋದಿಸಲಾಗುತ್ತದೆ. ಅರ್ಜಿ ಅನುಮೋದನೆಗೊಂಡ ತಕ್ಷಣ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಸಂದೇಶ ಬರಲಿದ್ದು, ಆ ಬಳಿಕ ನಿಗದಿಪಡಿಸಿದ ಕೌಂಟರ್‌ಗಳಲ್ಲಿ ಪಾಸ್ ಪಡೆಯಬಹುದು.

Related Articles

Back to top button