Kannada NewsKarnataka NewsLatest
*ಉಚಿತ ವಿದ್ಯುತ್ ‘ಗೃಹಜ್ಯೋತಿ’ ನಿಯಮದಲ್ಲಿ ಮಹತ್ವದ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಗೃಹಜ್ಯೋತಿ ನಿಯಮದಲ್ಲಿ ಬದಲವಣೆ ಮಾಡಲಾಗುವುದು. ಶೇಕಡಾವಾರು 10ರಷ್ಟು ಫ್ರೀ ವಿದ್ಯುತ್ ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಈವರೆಗೆ ಗೃಹಜ್ಯೋತಿ ಯೋಜನೆಯಲ್ಲಿ ಬಳಸಿದ ಯುನಿಟ್ ಗಿಂತ ಶೇ.10ರಷ್ಟು ರಿಯಾಯಿತಿ ಇತ್ತು. ಈಗ 10 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದರು.




