Belagavi NewsBelgaum NewsKannada NewsKarnataka NewsLatest
*ಹೃದಯಾಘಾತದಿಂದ ಅಶೋಕ ಪಾಟೀಲ ನಿಧನ*

ಪ್ರಗತಿವಾಹಿನಿ ಸುದ್ದಿ, ಗೋಕಾಕ : ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತರಾಗಿದ್ದ ಅಶೋಕ ಪಾಟೀಲ ಕಳೆದ ಸುಮಾರು 20 ವರ್ಷಗಳಿಂದ ಘಟಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದರು.
ಏಪ್ರಿಲ್ 27 ಮುಂಜಾನೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಅಶೋಕ ಪಾಟೀಲ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.




