Latest

ಗರಗ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಇಂದು

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಭಾನುವಾರ ಬೆಳಗ್ಗೆ ನಿಧನರಾದ ಗರಗ ಮಡಿವಾಳೇಶ್ವರ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಗರಗ ಗರಾಮದ ಮಠದ ಆವರಣಲ್ಲಿ ನಡೆಯಲಿದೆ.

88 ವರ್ಷದ ಶ್ರೀಗಳು ಭಾನುವಾರ ಬೆಳಗ್ಗೆ ಅನಾರೋಗ್ಯದಿಂದ ಶಿವೈಕ್ಯರಾಗಿದ್ದರು.

ಅಂತ್ಯಕ್ರಿಯೆಯಲ್ಲಿ ನಾಡಿನ ವಿವಿಧ ಮಠಾಧೀಶರು, ರಾಜಕೀಯ ಧುರೀಣರು ಹಾಗೂ ನಾನಾ ಭಾಗಗಳ ಭಕ್ತಾದಿಗಳು ಭಾಗವಹಿಸಲಿದ್ದಾರೆ.

ಮಠದ ಜವಾಬ್ದಾರಿ ವಹಿಸಿಕೊಂಡ ನಂತರ ಶ್ರೀಗಳು ಯಾವ ಪ್ರಚಾರ, ಆಡಂಬರಗಳಿಲ್ಲದೆ ಅಭಿವೃದ್ಧಿಪಡಿಸಿದ್ದರಲ್ಲದೆ ಅನ್ನದಾನ, ವಿದ್ಯಾದಾನಗಳ ಮೂಲಕ ಅನೇಕರಿಗೆ ನೆರವಾಗಿದ್ದರು.

Home add -Advt

ಭಾನುವಾರ ಮಧ್ಯಾಹ್ನದಿಂದ ಇಂದು ಬೆಳಗ್ಗೆ 7 ಗಂಟೆಯವರೆಗೂ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಅಪಾರ ಸಂಖ್ಯೆಯ ಭಕ್ತರು ಶ್ರೀಮಠಕ್ಕೆ ಆಗಮಿಸುತ್ತಿದ್ದಾರೆ.

ಬಿಜೆಪಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬ್ರಾಹ್ಮಣ ಸಮಾಜವೇ ಕಾರಣ – ಅಭಯ ಪಾಟೀಲ

https://pragati.taskdun.com/brahmin-society-is-the-reason-why-bjp-has-grown-to-such-a-large-extent-abhay-patil/

*ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

https://pragati.taskdun.com/aero-indiaair-showrajanath-singh/

*ಹಾಲಿ JDS ಶಾಸಕನಿಗೆ ಸೆಡ್ಡು ಹೊಡೆದು ಹೊಸ ಅಭ್ಯರ್ಥಿಗೆ ಅರಸಿಕೆರೆ ಟಿಕೆಟ್ ಘೋಷಿಸಿದ HDK*

https://pragati.taskdun.com/h-d-kumaraswamyarasikere-jds-candidateannouncebanavara-ashok/

Related Articles

Back to top button