Latest

*ಮನಗೆ ನುಗ್ಗಿ ಟಿವಿ, ಫ್ರಿಡ್ಜ್ ಪೀಸ್ ಪೀಸ್ ಮಾಡಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಗದಗ ನಗರದ ಪಂಚಾಕ್ಷರಿ ನಗರದಲ್ಲಿ ಹಾಡಹಗಲೇ ಸಿನಿಮಿಯ ರೀತಿಯಲ್ಲಿ ಮನೆಗೆ ನುಗ್ಗಿ‌ದ ಐವರು ದುಷ್ಕರ್ಮಿಗಳು ಮನೆಯಲ್ಲಿದ್ದ ಟಿವಿ, ಫ್ರಿಡ್ಜ್ ಪೀಸ್ ಪೀಸ್ ಮಾಡಿರುವ ಘಟನೆ ನಡೆದಿದೆ. 

Home add -Advt

ಏಕಾಏಕಿ ಮನೆಗೆ ನುಗ್ಗಿದ ಖದೀಮರು ಗೂಂಡಾಗಿರಿ ಮಾಡಿದ್ದಾರೆ. ಇದೆ ವೇಳೆ ಮನೆಯಲ್ಲಿದ್ದ ಮಹಿಳೆಯರ ಸೀರೆಯನ್ನೂ ಎಳೆದು ಅಸಭ್ಯ ವರ್ತನೆ ತೋರಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.‌

ಕೃತ್ಯವೆಸಗಿ ಹೋಗುವಾಗ ದುಷ್ಕರ್ಮಿಗಳು, ಮನೆ ಬಳಿ ಇದ್ದ ಜೀಪ್​​ಗೂ ಬೆಂಕಿ ಹಚ್ಚಿದ್ದಾರೆ. ಹುಯಿಲಗೋಳ ಗ್ರಾಮ ಪಂಚಾಯತಿ ಸದಸ್ಯರಾದ ಮಿಲಿಂದ್ ಕಾಳೆ ಹಾಗೂ ನಾಗರಾಜ್ ಕಾಳೆ ಎಂಬುವವರ ಕುಮ್ಮಕ್ಕಿನಿಂದ ದಾಳಿ ನಡೆದಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಗದಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button