
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಕೆ.ಬಿ.ಗುಡಸಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯಪಾಲ ವಜುಬಾಯಿ ವಾಲ ಅವರು, ಕೆಮೆಸ್ಟ್ರಿ ವಿಭಾಗದ ಪ್ರಾಧ್ಯಾಪಕರಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದಾರೆ.
ಗುಡಸಿ ಅವರು ಶನಿವಾರ ಪ್ರಭಾಕ ಕುಲಪತಿ ಡಾ. ಎಂ.ವಿಶ್ವನಾಥ ಅವರಿಂದ ಅಧಿಕಾರ ಸ್ವೀಕರಿಸಿದರು.