Latest

*ಶಿವಾನಂದ ತಗಡೂರು ಅವರಿಗೆ ಗಡಿನಾಡ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ; ಕಾಸರಗೋಡು: ಕೇರಳ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೊಡಮಾಡುವ ಕನ್ನಡ ಸಾಹಿತ್ಯ ರಾಜ್ಯೊತ್ಸವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಕಾಸರಗೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕೇರಳದ ಸಂಸದ ರಾಜಮೋಹನ ಉಣ್ಣಿತ್ತಾನ್ ಪ್ರಶಸ್ತಿ ಪ್ರದಾನ ಮಾಡಿದರು. ಕಾಸಗೋಡು ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಮಂಜೇಶ್ವರ ಶಾಸಕ ಎ.ಕೆ.ಅಶ್ರಫ್, ಡಾ.ಆರತಿ ಕೃಷ್ಣ , ಗಡಿನಾಡ ಅಕಾಡೆಮಿಯ ಅಧ್ಯಕ್ಷ ಚನಿಯಪ್ಪ ನಾಯ್ಕ, ಸಂಸ್ಥಾಪಕ ಅಧ್ಯಕ್ಷ ಪ್ರದೀಪ ಕಲ್ಕೂರ, ಹಿರಿಯ ಸಾಹಿತಿಗಳಾದ ರಮಾನಂದ ಬನಾರಿ ಮತ್ತಿತರರು ಹಾಜರಿದ್ದರು .

Home add -Advt

ಈ ವೇಳೆ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

​ಗ್ರಾಮೀಣ ಪ್ರದೇಶದಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆಗೆ ಪ್ರಯತ್ನ – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್​

https://pragati.taskdun.com/efforts-for-higher-education-in-rural-areas-mla-lakshmi-hebbalkar/

Related Articles

Back to top button