*ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ*; *ಸುಳ್ಳಿಗೆ ತಡೆ ಹಾಕಿ ಸತ್ಯ, ಅಂಹಿಸೆ ಎತ್ತಿ ಹಿಡಿಯಬೇಕಿದೆ : ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ, ಹಿರೇಬಾಗೇವಾಡಿ (ಬೆಳಗಾವಿ) : ಪ್ರಸ್ತುತ ಸನ್ನಿವೇಶದಲ್ಲಿ ಸಮಾಜದಲ್ಲಿ ಸುಳ್ಳು ಬಿತ್ತರಿಸುತ್ತಿರುವವರನ್ನು ತಡೆದು ಮಹಾತ್ಮಾ ಗಾಂಧಿಯವರ ತತ್ವದಂತೆ ಸತ್ಯ, ಅಹಿಂಸೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ವಿಧಾನ ಪರಿಷತ್ ಸದ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಮಹಾತ್ಮಾ ಗಾಂಧೀಜಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ 100ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವ ನಾವೆಲ್ಲರೂ ಪುಣ್ಯವಂತರು. ಮುಂದಿನ ಒಂದು ವರ್ಷಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈಗಿನ ಪೀಳಿಗೆಗೆ ಹಿರಿಯ ಆದರ್ಶಗಳನ್ನು ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಅವರು … Continue reading *ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ*; *ಸುಳ್ಳಿಗೆ ತಡೆ ಹಾಕಿ ಸತ್ಯ, ಅಂಹಿಸೆ ಎತ್ತಿ ಹಿಡಿಯಬೇಕಿದೆ : ಚನ್ನರಾಜ ಹಟ್ಟಿಹೊಳಿ*