Belagavi NewsBelgaum NewsKannada NewsKarnataka NewsPolitics

*ಗಣೇಶ ಹಬ್ಬದ ಸಿದ್ಧತೆ: ಕಪಿಲೇಶ್ವರ ಹೊಂಡದ ಪೂಜೆ ಮಾಡಿದ ಪಾಲಿಕೆ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿಯೇ ಬೆಳಗಾವಿಯಲ್ಲಿ ಗಣೇಶ ಹಬ್ಬ ಅತೀ ವಿಜೃಭಂಣೆಯಿಂದ ಆಚರಣೆ ಮಾಡಲಾಗುತ್ತದೆ. ಹಾಗಾಗಿ ಇಂದಿನಿಂದಲೇ ಹಬ್ಬದ ತಯಾರಿ ಮಾಡಿಕೊಳ್ಳುತ್ತಿರುವ ಮಹಾನಗರ ಪಾಲಿಕೆ ಅಧಿಕಾರಿಗಳು, ಕಪಿಲತೀರ್ಥ ಹೊಂಡದ ಪೂಜೆ ಮಾಡಿದ್ದಾರೆ.

ಬೆಳಗಾವಿ ನಗರದ 90% ಗಣೇಶ ಮೂರ್ತಿಗಳನ್ನು ಬೆಳಗಾವಿಯ ಕಪಿಲೇಶ್ವರ ಅಥವಾ ಕಪಿಲತೀರ್ಥ ಹೊಂಡದಲ್ಲಿ ವಿಸರ್ಜನೆ ಮಾಡಲಾಗುತ್ತದೆ, ಹಾಗಾಗಿ ಪಾಲಿಕೆ ಮೇಯರ್ ಸವಿತಾ ಕಾಂಬಳೆ, ಉಪ ಮೇಯರ್ ಆನಂದ ಚವ್ಹಾಣ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಪಾಲಿಕೆ ನಗರ ಸೇವಕರು ಕಪಿಲೇಶ್ವರ ಹೊಂಡಕ್ಕೆ ಪೂಜೆ ಸಲ್ಲಿಸುವ ಮೂಲಕ ಗಣೇಶ ಹಬ್ಬಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.‌ ಇದರ ಜೊತೆಗೆ ಹೊಂಡದ ಸುತ್ತಮುತ್ತಲು ಸ್ವಚ್ಚತೆ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.‌

Related Articles

Back to top button