Latest

ಗಣೇಶ ವಿಸರ್ಜನೆ ವೇಳೆ ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಗದಗ: ಗಣೇಶ ವಿಸರ್ಜನೆ ವೇಳೆ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ನಡೆದಿದೆ.

ಮೃತ ಯುವಕನನ್ನು ಸುದೀಪ್ ಎಂದು ಗುರುತಿಸಲಾಗಿದೆ. ಸ್ನೇಹಿತರೇ ಯುವಕ ಸುದೀಪ್ ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Home add -Advt

ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಯುವಕನ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವಿದ್ಯಾರ್ಥಿ ಮೇಲೆ ಕುದಿಯುವ ನೀರು ಸುರಿದ ಶಿಕ್ಷಕಿ

https://pragati.taskdun.com/latest/2nd-class-studentheat-water-throwteacher/

Related Articles

Back to top button