Belagavi NewsBelgaum NewsKannada News

ರಾಕಸಕೊಪ್ಪದಲ್ಲಿ ಗಂಗಾಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ಪ್ರಮುಖ ಜಲಾಶಯವಾಗಿರುವ ರಾಕಸಕೊಪ್ಪ ಜಲಾಶಯಕ್ಕೆ ಗಂಗಾಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ.

ಈ ವರ್ಷ ಮಳೆ ತಡವಾಗಿದ್ದರಿಂದ ರಾಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ಅತ್ಯಂತ ಕಡಿಮೆಯಾಗಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿತ್ತು. ಆದರೆ ಮಳೆ ಆರಂಭವಾಗಿ ವಾರದೊಳಗೆ ಜಲಾಶಯ ಭರ್ತಿಯಾಗಿದೆ. ಹಾಗಾಗಿ ಈಗ ಸಂಪ್ರದಾಯದಂತೆ ಜಲಾಶಯದಲ್ಲಿ ಗಂಗಾಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ.

Home add -Advt

ಆಗಸ್ಟ್ 1ರಂದು ಬೆಳಗ್ಗೆ 10. ಗಂಟೆಗೆ ಗಂಗಾಪೂಜೆ ನಡೆಯಲಿದೆ. ಪಾಲಿಕೆಯ ಮಹಾಪೌರರ ಗಂಗಾಪೂಜೆ ನೆರವೇರಿಸಲಿದ್ದು, ಜಿಲ್ಲೆಯ ಸಚಿವರು, ನಗರದ ಶಾಸಕರು, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

Related Articles

Back to top button