Belagavi NewsBelgaum NewsKannada NewsKarnataka NewsLife StylePolitics

*ಗಾಂಜಾ ಮಟ್ಕಾ ಪ್ರಕರಣ: ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸರು ಗಾಂಜಾ ಸೇವಿಸುತಿದ್ದ ಓರ್ವ ವ್ಯಕ್ತಿ ಹಾಗೂ ಮಟ್ಕಾ ಆಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಹಿರೇಬಾಗೇವಾಡಿ ಠಾಣೆ ಪೊಲೀಸ್‌ರಿಂದ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ

ಸೋಮನಾಥ ರಮೇಶ ಕಲ್ಲನ್ನವರ ಎಂಬ ಆರೋಪಿ ತಾರಿಹಾಳ ಗ್ರಾಮದ ಅಡವಿಸಿದ್ಧೇಶ್ವರ ಮಠದ ಮುಂದಿನ ಸಾರ್ವಜನಿಕ ರಸ್ತೆಯ ಮೇಲೆ ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್‌ರಿಂದ ಮಟಕಾ ದಾಳಿ: ಇಬ್ಬರ ಆರೋಪಿತರ ಬಂಧನ

Home add -Advt

ಬಸಪ್ಪ ಬಾಳಪ್ಪಾ ಕೊನಕೇರಿ (31) ಪ್ರಕಾಶ ಲಗಮಪ್ಪ ತಲ್ಲೂರಿ (28) ಎಂಬ ಆರೋಪಿಗಳು ಸೇರಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಮಚ್ಚೆ ಗ್ರಾಮ ಹದ್ದಿಯ ಅಶೋಕ ಐರಾನ್ ಪ್ಲಾಂಟ್-3 ಎದುರುಗಡೆಯ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಎಂಬ ಆಟದ ಮೇಲೆ ಸಾರ್ವಜನಿಕರಿಂದ ಹಣ ಹಚ್ಚಿಸಿಕೊಂಡು ಓಸಿ ಜುಗಾರ ಆಟದಲ್ಲಿ ತೊಡಗಿದ್ದಾಗ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿದ್ದಾರೆ.‌

ಈ ದಾಳಿಯಲ್ಲಿಯಲ್ಲಿ ಆರೋಪಿಗಳಿಂದ 2700 ರೂ ನಗದು ಹಣ ಹಾಗೂ ಎರಡು ಪ್ಲಾಸ್ಟಿಕ ಸ್ಕೂಲ ಅ.ಕಿ ರೂ-110/- ಮತ್ತು ಓಸಿ ಚೀಟಿಗಳನ್ನು ಜಪ್ತಪಡಿಸಿಕೊಂಡು ಆರೋಪಿತರ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

ಈ ಮೇಲಿನಂತೆ 2 ಪ್ರಕರಣಗಳಲ್ಲಿ 3 ಜನ ಆರೋಪಿತರನ್ನು ಬಂಧಿಸಿ ಅವರಿಂದ ಒಟ್ಟು 2700 ರೂ. ಹಣ ಹಾಗೂ ಓಸಿ ಚೀಟಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದಾಳಿ ಕೈಗೊಂಡ ಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Related Articles

Back to top button