Kannada NewsKarnataka NewsLatest

50 ಲಕ್ಷ ರೂ. ವೆಚ್ಚದಲ್ಲಿ ಗಾರ್ಡನ್ ಅಭಿವೃದ್ಧಿ – ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಚ್ಚು ಗಿಡಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕು​. ನಮ್ಮ ಸುತ್ತಲಿನ ಉದ್ಯಾನಗಳ ನಿರ್ವಹಣೆಗೆ ನಾವೇ ಮುಂದಾಗೋಣ​ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಕರೆ ನೀಡಿದರು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ನಿರ್ಮಾಣವಾಗಲಿರುವ ನಗರದ ಕುಮಾರಸ್ವಾಮಿ ಲೇ ಔಟ್‌ನ ಗಾರ್ಡನ್ ಕಾಮಗಾರಿಗೆ ​ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ​ 50 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನ ನಿರ್ಮಾಣವಾಗಲಿದೆ. ಸ್ಥಳೀಯರು ಹೆಚ್ಚು ಮುತುವರ್ಜಿ ವಹಿಸಿ ಕಾಮಗಾರಿಯನ್ನು ವ್ಯವಸ್ಥಿತವಾಗಿ ಮಾಡಿಸಿಕೊಳ್ಳಬೇಕು. ಮಾದರಿ ಉದ್ಯಾನವಾಗಿ ಅಭಿವೃದ್ಧಿಯಾಗಲು ಜನರು ಆಸಕ್ತಿ ವಹಿಸಿದಾಗ ಮಾತ್ರ ಸಾಧ್ಯ ಎಂದು ಅವರು ತಿಳಿಸಿದರು.​

​ಉದ್ಯಾನಗಳಿದ್ದರೆ ಸುತ್ತಲಿನ ಪರಿಸರ ಅಹ್ಲಾದಕರವಾಗಿರುತ್ತದೆ. ಉಸಿರಾಡುವ ಗಾಳಿ ಶುದ್ಧವಾಗಿರುತ್ತದೆ. ಹಾಗಾಗಿ ಉದ್ಯಾನಗಳನ್ನು ಸರಿಯಾಗಿ ನಿರ್ವಹಣೆ ಮಾಡುವ, ಸಂಬಂಧಿಸಿದವರಿಂದ ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು ​ಎಂದು ಮೃಣಾಲ ಹೇಳಿದರು.

​ ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು,​ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button