Kannada NewsKarnataka NewsLatest

*ಜಿಬಿಎ ಟಿವಿಸಿಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಪ್ರಾಧಿಕರ-ಜಿಬಿಎ ಟಿವಿಸಿಸಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್.ಆರ್.ನಗರದಲ್ಲಿ ರಸ್ತೆ ಕಾಮಗಾರಿ ಅಕ್ರಮ ಕುರಿತು ದೂರು ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಇನ್ಸ್ ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಜಿಬಿಎ ಟಿವಿಸಿಸಿ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಒಟ್ಟು ಐದು ಅಧಿಕಾರಿಗಳ ತಂಡ ಕಡತಗಳ ಪರಿಶೀಲನೆ ನಡೆಸಿದೆ. ಕಳಪೆ ಕಾಮಗಾರಿ ಹಾಗೂ ಕಾಮಗಾರಿಯಾಗದೇ ಬಿಲ್ ಅನುಮೋದನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

Home add -Advt

Related Articles

Back to top button