Kannada NewsKarnataka NewsLatest

*ಗಿರೀಶ್ ಹೊಸೂರು ಅವರಿಗೆ ಕೇಂದ್ರ ಸರ್ಕಾರದಲ್ಲಿ ಮಹತ್ವದ ಹುದ್ದೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ Ministry of Social Justice and Empowerment ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಗಿರೀಶ್ ಹೊಸೂರು ಅವರನ್ನು ನೇಮಕ ಮಾಡಲಾಗಿದೆ.

Home add -Advt

ಗಿರೀಶ್ ಹೊಸೂರು ಅವರು ತಮ್ಮ ಆಡಳಿತ ಅನುಭವ ಹಾಗೂ ಕಾರ್ಯಕ್ಷಮತೆಯಿಂದ ಹೆಸರಾಗಿರುವ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.


ಇದಕ್ಕೂ ಮೊದಲು ಅವರು Ministry of Human Resource Development (MHRD) ನಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದು, ಶಿಕ್ಷಣ ಕ್ಷೇತ್ರದ ಹಲವು ಪ್ರಮುಖ ಯೋಜನೆಗಳ ಜಾರಿಗೆ ಕೈಜೋಡಿಸಿದ್ದರು.


ಅದೇ ರೀತಿ, ಬೆಳಗಾವಿ ಅರಣ್ಯ ವಿಭಾಗದಲ್ಲಿ ಡಿಎಫ್ಓ ಆಗಿ ಕಾರ್ಯನಿರ್ವಹಿಸಿದ ವೇಳೆ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related Articles

Back to top button