Kannada NewsKarnataka NewsLatest

*ಗಿರೀಶ್ ಮಟ್ಟಣ್ಣವರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಿನಕ್ಕೊಂದು ಪ್ರಕರಣಗಳು ದಾಖಲಾಗುತ್ತಿವೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.

ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ರಾಜೇಂದ್ರ ದಾಸ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಅಖಲಾಗಿದೆ.

Home add -Advt

ಬಿಎನ್ ಎಸ್ ಕಾಯ್ದೆ 296ರಂತೆ ಪ್ರಕರಣ ದಾಖಲಾಗಿದೆ. ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ನಕಲಿ ಅಧಿಕಾರಿಯನ್ನು ತೋರಿಸಿದ ಆರೋಪದಲ್ಲಿ ಮೊನ್ನೆಯಷ್ಟೇ ಗಿರೀಶ್ ಮಟ್ಟಣ್ಣವರ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.


Related Articles

Back to top button