Kannada NewsKarnataka NewsLatest

*ಗಿರೀಶ್ ಮಟ್ಟಣ್ಣವರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಪರಿಚಯ ಮಾಡಿಸಿಕೊಟ್ಟಿದ್ದ ಆರೋಪದಲ್ಲಿ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Home add -Advt

ಧರ್ಮಸ್ಥಳ ಪ್ರಕರಣ ಸಂಬಂಧ ಗಿರೀಶ್ ಮಟ್ಟಣ್ಣವರ್ ಕೆಲ ದಿನಗಳ ಹಿಂದೆ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ ಪರಿಚಯಿಸಿದ್ದರು. ಇದೀಗ ಈ ಬಗ್ಗೆ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.


Related Articles

Back to top button