Karnataka News

*9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಬಾವಿ ತೋಡಲು ಬಂದಿದ್ದ ಕಾರ್ಮಿಕನಿಂದ ಕೃತ್ಯ*

ಪ್ರಗತಿವಾಹಿನಿ ಸುದ್ದಿ: 9 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ವೆಟ್ರಿವಲ್ (28) ಎಂಬಾತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾರೆ. ಬಾಲಕಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಬಾವಿ ತೋದುವ ಕೆಲಸಕ್ಕೆಂದು ತಮಿಳುನಾಡಿನ ಆರಮಂಗಲ ಗ್ರಾಮದಿಂದ ಬಂದಿದ್ದ ಕಾಮುಕ ಬಾಲಕಿಯನ್ನು ಪುಸಲಾಯಿಸಿ ಕೃತ್ಯವೆಸಗಿದ್ದಾನೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related Articles

Back to top button