Karnataka News

*ರುದ್ರಬಂಡೆಯಿಂದ ಕಡಲಿಗೆ ಹಾರಿದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ.

Home add -Advt

ಸೋಮೇಶ್ವರದ ಸಮುದ್ರ ತೀರದಲ್ಲಿ ರುದ್ರಬಂಡೆಯ ಮೇಲಿಂದ ಯುವತಿಯೊಬ್ಬಳು ಇಂದು ಬೆಳಿಗ್ಗೆ ಸಮುದ್ರಕ್ಕೆ ಜಿಗಿದಿದ್ದಾಳೆ. ಕಡ ಅಲೆಗಳ ನ್ಡುವೆಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಮೀನುಗಾರರು ಕಂಡು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ.

ಸದ್ಯ ಮೀನುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮಂಗಳೂರಿನ ಕಾಲೇಜಿನ ಪದವಿ ವಿದ್ಯಾರ್ಥಿನಿ ಎಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Related Articles

Back to top button