Kannada NewsLatest

ಗೋಕಾಕ್: ಬೀದಿ ದೀಪದ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದ ಕಿಡಿಗೇಡಿಗಳು

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಸೋಲಾರ್ ಲೈಟ್ ಕಂಬಕ್ಕೆ ಸತ್ತ ದನದ ಬುರುಡೆ ಕೊಂಬನ್ನು ಕಟ್ಟಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಅಳವಡಿಸಲಾಗಿರುವ ದಾರಿದೀಪ ಸೋಲಾರ್ ಲೈಟ್ ಕಂಬಕ್ಕೆ ಕಳೆದ ಎರಡು ದಿನಗಳಿಂದ ದನದ ಬುರುಡೆಯನ್ನು ಕಟ್ಟಿರುವುದು ಕಂಡುಬರುತ್ತಿದೆ. ಯಾರೂಕೂಡ ಇದನ್ನು ತೆಗೆಯುವ ಕೆಲಸಕ್ಕೆ ಮುಂದಾಗಿಲ್ಲ.

ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ದನದ ಬುರುಡೆಯನ್ನು ಲೈಟ್ ಕಂಬದ ಮೇಲ್ಭಾಗದಲ್ಲಿ ಕಟ್ಟಿ ವಿಕೃತಿ ಮೆರೆದಿದ್ದಾರೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಒತ್ತಾಯಿಸಿದ್ದಾರೆ.
ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button