
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ 4 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿದ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡೀನ್ ಸಿ.ಎಂ.ತ್ಯಾಗರಾಜ ಅವರನ್ನು ಆರ್ ಸಿಯು ಕುಲಪತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಅವರ ಅವಧಿ 4 ವರ್ಷ.
ಮಂಗಳೂರು ವಿಶ್ವವಿದ್ಯಾಲಯಕ್ಕೆ ಅದೇ ವಿವಿಯ ಪಿ.ಎಲ್.ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ವಿಶ್ವವಿದ್ಯಾಲಯಕ್ಕೆ ಹಂಪಿ ವಿಶ್ವವಿದ್ಯಾಲಯದ ಕೆ.ಎಂ.ಮೇತ್ರಿ ಅವರನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯಕ್ಕೆ ಹೈದರಾಬಾದ್ ವಿಶ್ವವಿದ್ಯಾಲಯದ ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.