
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗಣೇಶಪುರದ ಕ್ರಾಂತಿನಗರದಲ್ಲಿ “ಕ್ರಾಂತಿನಗರ ನಾಗರೀಕರ ಕ್ಷೇಮಾಭಿವೃದ್ಧಿ ಸಂಘ” ವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.

ಇಲ್ಲಿನ ನಿವಾಸಿಗಳು ರಸ್ತೆ, ಗಟಾರ ನಿರ್ಮಾಣ ಬೇಡಿಕೆಯನ್ನು ಇಟ್ಟಿದ್ದು, ಆದಷ್ಟು ಬೇಗ ಈ ಎಲ್ಲ ಕಾಮಗಾರಿಗಳನ್ನು ಮಾಡಿಸುವುದಾಗಿ ಹೆಬ್ಬಾಳಕರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಜನಪ್ರತಿನಿಧಿಗಳು, ಅಶೋಕ ಚಂದರಗಿ, ಯುವರಾಜ ಕದಂ, ಸಂಘದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.