Kannada NewsLatest

ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧ : ಯಡಿಯೂರಪ್ಪ

ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧ : ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ : ಬೆಂಗಳೂರು – ಪ್ರತಿಯೊಂದು ಪರಿಸ್ಥಿತಿಯನ್ನು ಎದುರಿಸಲು ತಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು (ಗುರುವಾರ ಸ್ವಾತಂತ್ರ್ಯ ದಿನಾಚರಣೆಯಂದು) ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಪ್ರವಾಹ ಮತ್ತು ಮಳೆಯ ಪರಿಣಾಮ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿದೆ. ಆದುದರಿಂದ ಈ ಸಮಾರಂಭಗಳನ್ನು ಸರಳ ರೀತಿಯಲ್ಲಿ ಆಯೋಜಿಸಲಾಗಿದೆ ಎಂದರು. ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡಿ, ತ್ರಿರಂಗ ದ್ವಜಕ್ಕೆ ಗೌರವ ಸೂಚಿಸಿದರು. ನಂತರ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳು ನೀಡಿದರು.

Home add -Advt

ಕರ್ನಾಟಕದ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ನಂತರ ಈ ಸ್ವಾತಂತ್ರ್ಯ ದಿನದಂದು ತಮ್ಮ ಮೊದಲ ಭಾಷಣ ಮಾಡಿದರು. “ಅಭಿವೃದ್ಧಿಯು ಆಡಳಿತದ ಮಂತ್ರ ಎಂದು ತಮ್ಮ ಸರ್ಕಾರ ನಂಬಿದೆ ಎಂದು ಹೇಳಿದರು”. ರಾಜ್ಯದ ಹೆಚ್ಚಿನ ಭಾಗಗಳು ಪ್ರವಾಹ ಮತ್ತು ನಿರಂತರ ಮಳೆಯಿಂದ ಬಾರಿ ಪ್ರಭಾವಿತವಾಗಿರುವುದರಿಂದ ಸ್ವಾತಂತ್ರ್ಯ ದಿನವನ್ನು ಸರಳೀಕೃತ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು..

ಹಲವಾರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ, ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಮ್ಮ ಭಾಷಣದ ಆರಂಭಿಕ ಭಾಗದಲ್ಲಿ, ಪ್ರವಾಹ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರವು ಮಾಡಿದ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಉಲ್ಲೇಖಿಸಿ ಯಡಿಯೂರಪ್ಪ ಮಾತನಾಡಿದರು, ಕರ್ನಾಟಕವು ಬರ ಮತ್ತು ಪ್ರವಾಹದ ಎರಡು ತೀವ್ರ ಪರಿಸ್ಥಿತಿಗಳ ನಡುವೆ ಸಿಲುಕಿಕೊಂಡಿದೆ ಎಂದು ವಿಷಾದ ವ್ಯಕ್ತ ಪಡಿಸಿದರು. ಎರಡೂ ನಿರ್ಣಾಯಕ ಸಂದರ್ಭಗಳಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಅವರು ಹೇಳಿದರು.////

Related Articles

Back to top button