Kannada NewsKarnataka NewsLatest

ಬೆಳಗಾವಿ: ಮನೆಗೆ ಬೆಂಕಿ ಬಿದ್ದು ಗ್ರಾಮ ಪಂಚಾಯಿತಿ ಸದಸ್ಯ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ, ಕಾಗವಾಡ – ಮನೆಗೆ ಬೆಂಕಿ ಬಿದ್ದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಜೀವ ದಹನ ಆದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ  ಬುಧವಾರ ತಡರಾತ್ರಿ ಸಂಭವಿಸಿದೆ.
ಸೋಮಶೇಖರ್ ಶಿವಾನಂದ ಪಾಟೀಲ್(32) ಮೃತ ದುರ್ದೈವಿ. ಇವರು ಶಿರಗುಪ್ಪಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.
ನಿನ್ನೆ ರಾತ್ರಿ ಮನೆಯಲ್ಲಿ ಇವರೊಬ್ಬರೇ ಮಲಗಿದ್ದರು. ಈ ವೇಳೆ ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಆವರಿಸಿದ್ದು, ಸೋಮಶೇಖರ್​ ಸಜೀವ ದಹನ ಆಗಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button