
ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಹೋಳಿ ಹಬ್ಬದ ಕಾರ್ಯಕ್ರಮವೊಂದರ ಮೇಲೆ ದಾಳಿ ನಡೆಸಿದ ಬಜರಂಗದಳದ ಆರು ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮರೋಳಿಯಲ್ಲಿ ಹೋಳಿ ಹಬ್ಬದ ನಿಮಿತ್ತ ‘ರಂಗ್ ದೇ ಬರ್ಸಾ’ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಿಂದೂ ಹುಡುಗಿಯರೊಂದಿಗೆ ಇತರ ಸಮುದಾಯದ ಹುಡುಗರು ಸಹ ಭಾಗವಹಿಸಿದ್ದರು. ಇವರೆಲ್ಲ ಶುಲ್ಕ ಪಾವತಿ ಮಾಡಿ ಪ್ರವೇಶ ಪಡೆದು ಪರಸ್ಪರ ಬಣ್ಣ ಎರಚಿಕೊಂಡು ಡಿಜೆ ಸಂಗೀತಕ್ಕೆ ಕುಣಿಯುತ್ತಿದ್ದರು.
ಈ ಗದ್ದಲಕ್ಕೆ ಕೆಲವರು ಕಂಕನಾಡಿ ಠಾಣೆ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕ- ಯುವತಿಯರು ಮೈಮರೆತು ಅಶ್ಲೀಲವಾಗಿ ನರ್ತಿಸಿದ್ದಾರೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ನಡೆಯುವಲ್ಲಿ ನುಗ್ಗಿ ಅಲ್ಲಿ ಅಳವಡಿಸಿದ್ದ ಎಲ್ಲಾ ಉಪಕರಣಗಳು ಮತ್ತು ಡೆಕೊರೇಶನ್ ಗಳನ್ನು ಕಿತ್ತೆಸೆದರು.
ಮಧ್ಯ ಪ್ರವೇಶಿಸಿದ ಪೊಲೀಸರು ಬಜರಂಗದಳದ ಸದಸ್ಯರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.