Kannada NewsKarnataka NewsLatest
*ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಗ್ರಾಮ ಪಂಚಾಯಿತಿ ಸದಸ್ಯ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಸಂಭವಿಸುತ್ತಿದೆ. ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಆಲೂರು ತಾಲೂಕಿನ ಕಲ್ಲಾರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. 41 ವರ್ಷದ ಸಂತೋಷ್ ಮೃತ ದುರ್ದೈವಿ. ಸಂತೋಷ್ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದಿದ್ದಾಗ ಕುಟುಂಬದವರು ಸಂತೋಷ್ ಅವರನ್ನು ಕರೆದು, ಎಬ್ಬಿಸಲು ಯತ್ನಿಸಿದಾರೆ. ಆದಾಗ್ಯೂ ಎಚ್ಚರಗೊಂಡಿಲ್ಲ.
ಗಾಬರಿಯಾದ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.




