Latest

ಆರತಕ್ಷತೆ ವೇಳೆ ಕುಸಿದುಬಿದ್ದು ವರನ ಸಾವು

ಪ್ರಗತಿವಾಹಿನಿ ಸುದ್ದಿ, ಹೊಸಪೇಟೆ: ಮದುವೆ ಆರತಕ್ಷತೆ ಸಂದರ್ಭದಲ್ಲೇ ವರನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದು  ಸಂಭ್ರಮದ ಮನೆ ಶೋಕದ ಮನೆಯಾಗಿ ಮಾರ್ಪಟ್ಟಿದೆ.

ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಹೊನ್ನೂರಸ್ವಾಮಿ(26) ಮೃತಪಟ್ಟವ.

ಏಕಾಏಕಿ ಎದೆನೋವಿನಿಂದ ಕುಸಿದು ಬಿದ್ದ ಹೊನ್ನೂರಸ್ವಾಮಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಸ್ನೇಹಿತರ ಸಮ್ಮುಖದಲ್ಲೇ ಚುಂಬನದ ಚಾಲೆಂಜ್ ಪೂರೈಸಿದ ವಿದ್ಯಾರ್ಥಿ

Home add -Advt

 

Related Articles

Back to top button