
ಪ್ರಗತಿವಾಹಿನಿ ಸುದ್ದಿ, ಹೊಸಪೇಟೆ: ಮದುವೆ ಆರತಕ್ಷತೆ ಸಂದರ್ಭದಲ್ಲೇ ವರನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದು ಸಂಭ್ರಮದ ಮನೆ ಶೋಕದ ಮನೆಯಾಗಿ ಮಾರ್ಪಟ್ಟಿದೆ.
ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಹೊನ್ನೂರಸ್ವಾಮಿ(26) ಮೃತಪಟ್ಟವ.
ಏಕಾಏಕಿ ಎದೆನೋವಿನಿಂದ ಕುಸಿದು ಬಿದ್ದ ಹೊನ್ನೂರಸ್ವಾಮಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರು. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಸ್ನೇಹಿತರ ಸಮ್ಮುಖದಲ್ಲೇ ಚುಂಬನದ ಚಾಲೆಂಜ್ ಪೂರೈಸಿದ ವಿದ್ಯಾರ್ಥಿ