Kannada NewsKarnataka NewsLatestPolitics

*ಗೃಹಲಕ್ಷ್ಮೀ ಯೋಜನೆ; ಇಂದು ನಾಡಿನೆಲ್ಲೆಡೆ ಹಬ್ಬದ ವಾತಾವರಣವಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಇಂದು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡುತ್ತಿದ್ದೇವೆ. ಹಾಗಾಗಿ ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂದು ಮನೆ ಯಜಮಾನಿಯರ ಖಾತೆಗೆ 2000 ಹಣ ವರ್ಗಾವಣೆಯಾಗಲಿದೆ. ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದೆ. ಇಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ. ಇದು ಕಾಂಗ್ರೆಸ್ ಹಬ್ಬ ಮಾತ್ರವಲ್ಲ ಇಡೀ ರಾಜ್ಯದ ಜನರ ಹಬ್ಬ ಎಂದು ಹೇಳಿದರು.

ಬಿಜೆಪಿಯವರನ್ನು ಕೇವಲ ಭರವಸೆ ಮಾತ್ರ. ಆದರೆ ನಮ್ಮದು ಗ್ಯಾರಂಟಿ. ಚುನವಣೆ ವೇಳೆ ನಾವು ನೀಡಿದ್ದ 5 ಗ್ಯಾರಂಟಿಗಳಲ್ಲಿ ನಾಲ್ಕು ಯೋಜನೆ ಜಾರಿಯಾಗಿದೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button