Kannada NewsKarnataka NewsLatest

*ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ; 3 ಸೈಬರ್ ಕೇಂದ್ರಗಳ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಆರೋಪದಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ.

ಮೂರು ಸೈಬರ್ ಕೇಂದ್ರಗಳಲ್ಲಿ ಜನರಿಂದ 250 ರೂಪಾಯಿಯಿಂದ 350 ರೂಪಾಯಿ ಹಣ ವಸೂಲಿ ಮಾಡಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನ್ವಿ ತಾಲೂಕಿನ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಗೃಹಲಕ್ಷ್ಮೀ ಯೋಜನೆಗೆ ಸರ್ಕಾರಿ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ ಸಲ್ಲಿಸುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮೂರು ಸೈಬರ್ ಕೇಂದ್ರಗಳನ್ನು ಸೀಜ್ ಮಾಡಿರುವ ತಹಶೀಲ್ದಾರ್, ಮಾನ್ವಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂರು ಸೈಬರ್ ಕೇಂದ್ರಗಳ ವಿರುದ್ಧ ಪ್ರತ್ಯೇಕ ದೂರು ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button