Kannada NewsKarnataka NewsLatest

*ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ: ಗೃಹಲಕ್ಷ್ಮೀ ಚುನಾವಣಾ ಲಕ್ಷ್ಮಿಯಾಗಿದೆ: ವಿಜಯೇಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಪರೀಷ್ಕರಣೆ ಹಾಗೂ ಹೊಸ ಮಾನದಂಡಗಳನ್ನು ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ.

Related Articles
Home add -Advt

ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಲಕ್ಷಾಂತರ ಫಲಾನುಭವಿಗಳನ್ನು ಕಡಿತಗೊಳಿಸುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಟೀಕಿಸಿದ್ದಾರೆ.

Related Articles

Back to top button