
ಪ್ರಗತಿವಾಹಿನಿ ಸುದ್ದಿ; ಮೈಸೂರು: ಗುಜರಾತ್ ನಲ್ಲಿ ಬಿಜೆಪಿಯೇ ಗುವು ಸಾಧಿಸುತ್ತದೆ ಎಂಬ ನಿರೀಕ್ಷೆ ಇತ್ತು. ಅಮ್ ಆದ್ಮಿ ಪಕ್ಷದಿಂದ ಮತವಿಭಜನೆಯಾಗಿದೆಯಷ್ಟೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಯಾವ ಪರಿಣಾಮವೂ ಬೀರಲ್ಲ. ಗುಜರಾತ್ ರಾಜ್ಯವನ್ನು ಕರ್ನಾಟಕ್ಕೆ ಹೋಲಿಕೆ ಮಾಡಬೇಡಿ. ಒಂದು ರಾಜ್ಯದ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀರಲ್ಲ ಎಂದು ಹೇಳಿದರು.
ಗುಜರಾತ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಹಳ ಹಣ ಖರ್ಚು ಮಾಡಿದೆ. ಅಷ್ಟು ದುಡ್ಡು ಖರ್ಚು ಮಾಡಿದರೂ ಆಪ್ ಕೇವಲ 6 ಸ್ಥಾನಗಳನ್ನು ಮಾತ್ರ ಪಡೆದಿದೆ. ಆಮ್ ಆದ್ಮಿ ಪಕ್ಷದಿಂದ ಮತ ವಿಭಜನೆಯಾಗಿದೆ ಅಷ್ಟೇ. ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಫಂಡಿಂಗ್ ಮಾಡಿದ್ದೇ ಬಿಜೆಪಿ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಶಕ್ತಿಯುತವಾಗಿದೆ. ಇಲ್ಲಿರುವುದು ಭ್ರಷ್ಟ ಬಿಜೆಪಿ ಸರ್ಕಾರ. ಜೆಡಿಎಸ್ ಜೊತೆ ಸೇರಿ ಬಿಜೆಪಿ ತಂತ್ರಗಾರಿಕೆ ನಡೆಸಬಹುದು ಆದರೆ ನಡೆಯಲ್ಲ. ಕರ್ನಾಟಕದಲ್ಲಿ ಸೋಲುತ್ತೇವೆ ಎಂದು ಬಿಜೆಪಿಗೆ ಗೊತ್ತಿದೆ. ಇಲ್ಲಿ ಕಾಂಗ್ರೆಸ್ ಯಾವುದೇ ತಂತ್ರಗಾರಿಕೆ ನಡೆಸುವುದೂ ಬೇಡ. ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನಿದ್ದರೂ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲಿ ಮೋದಿ ಹವಾ ಇಲ್ಲ, ಇದ್ದಿದ್ರೆ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಯಾಕೆ ಸೋಲುತ್ತಿದ್ದರು? ಗುಜರಾತ್ ಫಲಿತಾಂಶ ನಮ್ಮ ರಾಜ್ಯದ ಏಲೆ ಯಾವ ಪರಿಣಾಮವನ್ನೂ ಬೀರಲ್ಲ. ಹಿಮಾಚಲಪ್ರದೆಶದಲ್ಲಿ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಗೆ ಪ್ಲಸ್ ಆಗಿದೆ. ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಗುಜರಾತ್ ನಲ್ಲಿ BJP ಪ್ರಚಂಡ ಗೆಲುವು: ಡಿಸೆಂಬರ್ 12ರಂದು ಸಿಎಂ ಪ್ರಮಾಣವಚನ
https://pragati.taskdun.com/gujarathelectionbjp-winbhupendra-pateloath/