National

*ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ: 7 ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿದು ಬಿದ್ದು 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಜಸಲ್ಪುರದಲ್ಲಿ ಈ ದುರಂತ ಸಂಭವಿಸಿದೆ. ಕಾರ್ಖಾನೆ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾರ್ಖಾನೆಗೆ ಟ್ಯಾಂಕ್ ಅಳವಡಿಸಲು ಮಣ್ಣು ಅಗೆಯುವಾಗ ಏಕಾಏಕಿ ಮಣ್ಣು ಕುಸಿದು ಬಿದ್ದಿದೆ. 7 ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮಣ್ಣಿನ ಅವಶೇಷಗಳಡಿ ಇನ್ನೂ 4-5 ಜನರು ಸಿಲುಕಿಕೊಂಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button