Kannada NewsKarnataka NewsLatestPolitics
*RSS ವಿರುದ್ಧ ಗಂಭೀರ ಆರೋಪ; ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರ್.ಎಸ್.ಎಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಈ ಕುರಿತ ಆಡಿಯೋ ವೈರಲ್ ಆಗಿದೆ.
ತಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ನಾಗಪುರದ ಆರ್.ಎಸ್.ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ನನಗೆ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವುದನ್ನು ಸ್ಪಷ್ಟಪಡಿಸುವುವಿರಾ? ಎಂದು ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಕೇಳಿದ್ದಾರೆ. ಈ ಕುರಿತ ಆಡಿಯೋ ಇದೀಗ ಭಾರಿ ಚರ್ಚೆಗೆ ಕರಣವಾಗಿದೆ.
ಗೂಳಿಹಟ್ಟಿ ಶೇಖರ್ ಗೆ ಆರ್.ಎಸ್.ಎಸ್ ಕಚೇರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಅವರ ಹೆಳಿಕೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಆಡಳಿತಾರೂಢ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.




