Karnataka News

*ಜಾತ್ರಾ ಮಹೋತ್ಸವದ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಜಾತ್ರಾಮಹೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

Home add -Advt

24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ. ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ನೂಕುನುಗ್ಗಲು ಉಂಟಾಗಿ ಯುವಕ ಆಯತಪ್ಪಿ ಬಿದ್ದಿದ್ದಾನೆ. ಈ ವೇಳೆ ರಥದ ಚಕ್ರಕ್ಕೆ ಯುವಕ ಸಿಲುಕಿ ಸಾವನ್ನಪ್ಪಿದ್ದಾನೆ.

ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button