Karnataka NewsLatestPolitics
*ಪಾದಯಾತ್ರೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ಜೆಡಿಎಸ್ ಇಂದು ಹಾಗೂ ನಾಳೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ಆರಂಭಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಚಾಮುಂಡಿ ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಶಾಸಕರು ಸಾಥ್ ನೀಡಿದ್ದಾರೆ.
ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಇಂದು ಹಾಗೂ ನಾಳೆ ಹಮ್ಮಿಕೊಂಡಿದ್ದು, ಇಂದು ಬಿಡದಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರೂ ಸಾಂಕೇತಿಕವಾಗಿ ಪಾಲ್ಗೊಳ್ಳಲಿದ್ದಾರೆ. ಇದೀಗ ಪಾದಯಾತ್ರೆಗೆ ಮುನ್ನ ಕುಮಾರಸ್ವಾಮಿ ನಾಡ ಅದಿದೇವತೆ ಚಾಮುಂಡಿ ತಾಯಿ ದರ್ಶನ ಪಡೆದಿದ್ದಾರೆ.




