*BREAKING NEWS: ಸುದ್ದಿಗೋಷ್ಠಿ ವೇಳೆಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಏಕಾಏಕಿ ಮೂಗಿನಿಂದ ರಕ್ತಸ್ರಾವವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ-ಜೆಡಿಎಸ್ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಹೆಚ್.ಡಿ.ಕುಮರಸ್ವಾಮಿ ಮೂಗಿನಿಂದ ರಕ್ತ ಸುರಿಯಲಾರಂಭಿಸಿದೆ. ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಕುಮಾರಸ್ವಾಮಿ ತೆರಳಿದ್ದಾರೆ. ತಕ್ಷಣ ಕುಮಾರಸ್ವಾಮಿ ಅವರನ್ನು ಆಪ್ತರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. *ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ; ರಾಜ್ಯ ಸರ್ಕಾರದಿಂದಲೇ ಅನ್ಯಾಯವಾಗಿದೆ ಎಂದ HDK*