ಮಲಗಿದ್ರೆ-ಸಾವು, ಕೂತಿದ್ರೆ–ರೋಗ, ನಡೀತಿದ್ರೆ ಜೀವನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಮುಂಜಾಗೃತಾ ಕ್ರಮವಾಗಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದ್ದರೂ ಜನರು ಅಲ್ಲಲ್ಲಿ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಈ ನಡುವೆ ರಿಯಲ್ ಸ್ಟಾರ್ ಉಪೇಂದ್ರ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿದ್ದು, ಒಂದು ಸಂಪೂರ್ಣ ಲಾಕ್ ಡೌನ್ ಘೋಷಿಸಿ ಇಲ್ಲ ಲಾಕ್ ಡೌನ್ ತೆರವುಗೊಳಿಸಿ ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿರುವ ಉಪೇಂದ್ರ ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ ಎಂದಿದ್ದಾರೆ.

1. ಶೇಕಡ ನೂರಕ್ಕೆ ನೂರು ಲಾಕ್‍ಡೌನ್: ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆಮನೆಗೆ ತಲುಪಿಸಿ
* ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರುತ್ತಾರೆ.
* ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.

2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್‍ಡೌನ್ ತೆರೆಯಿರಿ: ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅವರವರ ವ್ಯವಹಾರಗಳನ್ನು ಮುಂದುವರಿಸುವುದು. ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರು (ಹೀಗೆ ನಾಯಕರಯ ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ.
* ಲಾಕ್‍ಡೌನ್ ಮಾಡಿ ಜನರನ್ನು ಹಾಲು, ರೇಷನ್ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯ್ಯುವುದು ಎಷ್ಟು ಸರಿ?

Home add -Advt

ಇಷ್ಟೆಲ್ಲಾ ಲಾಕ್‍ಡೌನ್ ಮಾಡಿಯೇ ನಮ್ಮ ದಡ್ಡ ಜನರು ಹೀಗೆ. ಇನ್ನು ಲಾಕ್‍ಡೌನ್ ತೆಗೆದ್ರೆ ರೋಡ್ ರೋಡಲ್ಲಿ ಹೆಣ ಬೀಳುತ್ತೆ ಅಂತ ಹೇಳುವವರಿಗೆ (ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್‍ಡೌನ್ ಮುಂದುವರಿಸಿದ್ರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ.
ಮಲಗಿದ್ರೆ-ಸಾವು | ಕೂತಿದ್ರೆ – ರೋಗ | ನಡೀತಿದ್ರೆ ಜೀವನ ಎಂದು ಬರೆದು ಸಿಎಂ ಯಡಿಯೂರಪ್ಪನವರಿಗೆ ಟ್ಯಾಗ್ ಮಾಡಿದ್ದಾರೆ.

Related Articles

Back to top button