ಸಿ.ಪಿ ಯೋಗೇಶ್ವರ್ ವಿರುದ್ಧ ಹೆಚ್ ಡಿಕೆ ಹೊಸ ಬಾಂಬ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್​ ಬಿಜೆಪಿ ಸರ್ಕಾರವನ್ನು ಬೀಳಿಸಲು ಯೋಜನೆ ರೂಪಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್​​ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್​ ಬಿಜೆಪಿ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ. ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ಈ ಕುರಿತಾಗಿ ಪ್ಲ್ಯಾನ್ ನಡೆಯುತ್ತಿದೆ. ಉದಯ್​ಗೌಡ ಬೆಂಗಳೂರಿನಲ್ಲಿ ಇಸ್ಪೀಟ್ ದಂಧೆ ನಡೆಸುತ್ತಿದ್ದಾನೆ. ನನ್ನ ಸರ್ಕಾರದಲ್ಲಿ ಅದಕ್ಕೆಲ್ಲಾ ಕಡಿವಾಣ ಹಾಕಿದ್ದೆ. ಹಾಗಾಗಿ ಇವರೆಲ್ಲಾ ಸೇರಿ ಹಣ ಹಾಕಿ ನನ್ನ ಸರ್ಕಾರ ಬೀಳಿಸಿದರು. ಈಗ ಈ ಕ್ಷೇತ್ರದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್​​​ ಜೊತೆಗೆ ಸೇರಿ ಬಿಜೆಪಿ ಸರ್ಕಾರ ತೆಗೆಯಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಉದಯ್​ಗೌಡ ಹಾಗೂ ಇತರರು ನನ್ನ ಸರ್ಕಾರ ಬೀಳಿಸಲು ಈ ಹಿಂದೆ ಯಡಿಯೂರಪ್ಪನವರಿಗೆ ಹಣ ಕೊಟ್ಟಿದ್ದರು. ಆದರೆ ಈಗ ಅವರೇ ಯಡಿಯೂರಪ್ಪನವರ ಸರ್ಕಾರ ತೆಗೆಯಲು ಹೊರಟಿದ್ದಾರೆ. ಹೀಗಾಗಿ ಉದಯ್​ಗೌಡ ಅವರು ನಡೆಸುತ್ತಿರುವ ದಂಧೆಗಳ ಮೇಲೆ ದಾಳಿ ನಡೆಯುತ್ತಿವೆ ಎಂದರು.

ಚೆನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕರು ಮಂತ್ರಿಯಾಗುತ್ತೇನೆ ಎಂದು ಮಂಡ್ಯದವರೆಗೆ ಬ್ಯಾನರ್​​ಗಳನ್ನು ಹಾಕಿಸಿಕೊಂಡಿದ್ದರು. ಆದರೆ ಈಗ ಯಡಿಯೂರಪ್ಪನವರು ಅವರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಹಾಗಾಗಿ ಬಿಜೆಪಿ ಸರ್ಕಾರ ಕೆಡವಲು ರಣತಂತ್ರ ಹೆಣೆದಿದ್ದಾರೆ. ಅದಕ್ಕೆಲ್ಲಾ ಮೂಲ ಪುರುಷ ಇವರೇ ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button