Politics

*ಎಷ್ಟು ದಿನ ಈ ಕಳ್ಳ ಪೊಲೀಸ್ ಆಟ? ಕೈ ಮುಗಿದು ಕೇಳಿಕೊಳ್ಳುತ್ತೇನೆ ಬೇಗ ಬಂದು ಶರಣಾಗು: ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಸಕ್ಕೆ ಹೋಗಿ ತಲೆಮರೆಸಿಕೊಂಡಿರುವ ಪ್ರಜ್ವಲ್ ದೇಶಕ್ಕೆ ಆಗಮಿಸಲು ಮೀನಾಮೇಷ ಎಣಿಸುತ್ತಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬೇಗ ದೇಶಕ್ಕೆ ಬಂದು ಶರನಾಗು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ವಿದೇಶದಿಂದ ಬಂದು ತನಿಖೆಗೆ ಸಹಕರಿಸಬೇಕು. ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು? ಎಷ್ಟು ದಿನ ಈ ಕಳ್ಳ ಪೊಲೀಸ್ ಆಟ? ಬೇಗ ಬಂದು ಶರಣಾಗು ಎಂದರು.

ಕೈ ಮುಗಿದು ಮನವಿ ಮಾಡುತ್ತೇನೆ, ನನ್ನ ಹಾಗೂ ಹೆಚ್.ಡಿ.ದೇವೇಗೌಡರ ಮೇಲೆ ಗೌರವ ಇದ್ದರೆ 24-48ಗಂಟೆಯೊಳಗಾಗಿ ಬಂದು ಶರಣಾಗು. ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

Related Articles

Back to top button