Latest

ರಾಜ್ಯದಲ್ಲಿ ಮುಂದೆ ಏನಾಗುತ್ತೆ ಎಂಬುದಕ್ಕೆ ಇದು ಟ್ರಯಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಸದಸ್ಯನನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ ಎಂದರೆ ರಾಜ್ಯದ ಜನರನ್ನು ಹೇಗೆ ರಕ್ಷಿಸುತ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ನಡೆದಿದೆ. ಎರಡು ವರ್ಷಗಳ ಹಿಂದೆ ಭಜರಂಗದಳ ಕಾರ್ಯಕರ್ತ ಹರ್ಷನಗೆ ಸಂಚು ನಡೆದಿತ್ತು, 10 ಲಕ್ಷ ರೂಪಾಯಿ ಘೋಷಿಸಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಮಾಹಿತಿ ಇರಲಿಲ್ಲವೇ? ಆದಾಗ್ಯೂ ಯಾಕೆ ಆತನ ರಕ್ಷಣೆಗೆ ಮುಂದಾಗಿಲ್ಲ.? ಇವರ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಓರ್ವ ಸದಸ್ಯನ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಇನ್ನು ರಾಜ್ಯದ ಜನರನ್ನು ಹೇಗೆ ರಕ್ಷಣೆ ಮಾಡ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಘಟನೆ ನೋಡಿದರೆ ಮುಂದೆ ರಾಜ್ಯದಲ್ಲಿ ಏನಾಗಲಿದೆ ಎಂಬುದರ ಟ್ರಯಲ್ಲಾ ಎಂಬ ಅನುಮಾನವಿದೆ. ಇನ್ನೊಂದು ವಾರ ರಾಜಕೀಯ ನಾಯಕರು ಮೃತ ಹರ್ಷನ ಮನೆಗೆ ಹೋಗಿ ಸ್ವಾಂತ್ವನ ಹೇಳಿ ಮೊಸಳೆ ಕಣ್ಣೀರು ಹಾಕ್ತಾರೆ. ನಿನ್ನೆ ನಡೆದ ಘಟನೆ ಹಿಂದಿನ ನಿಜವಾದ ಉದ್ದೇಶ ಏನು ಎಂಬುದು ಗೊತ್ತಾಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿಯೂ ಹಲವು ಅಹಿತಕರ ಘಟನೆ ನಡೆದಿತ್ತು.ಆಗ ಬಿಜೆಪಿ ನಾಯಕರು ಆರೋಪ ಮಾಡಿದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅಹಿತಕರ ಘಟನೆ ನಡೆಯುತ್ತಿದೆ. ಈಗ ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಪರಸ್ಪರ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವ ಬದಲು ಭಜರಂಗದಳ ಕಾರ್ಯಕರ್ತನ ಹತ್ಯೆ ಹಿಂದಿನ ಕಾರಣವೇನು ಎಂಬುದು ತಿಳಿಯಬೇಕಿದೆ. ಆ ನಿಟ್ಟಿನಲ್ಲಿ ತನಿಖೆ ನಡೆಸಲಿ ಎಂದರು.

Home add -Advt

ಶಿವಮೊಗ್ಗ ಯುವಕನ ಮರ್ಡರ್: CM ಬೊಮ್ಮಾಯಿ ಹೇಳಿಕೆ

Related Articles

Back to top button